Indian Police TV

ಮೊಬೈಲ್ ಪೋನ್ ಕಳ್ಳತನ ಮಾಡಿದ್ದ ವ್ಯಕ್ತಿಗಳ ವಶ.

**7 ಲಕ್ಷ ಬೆಲೆ ಬಾಳುವ 20 ಮೊಬೈಲ್ ಫೋನ್‌ಗಳ ವಶಕ್ಕೆ ಪಡೆಯುವಲ್ಲಿ ಪೊಲೀಸರು ಯಶಸ್ವಿ**

ಹೆಚ್.ಎ.ಎಲ್ ಪೊಲೀಸ್ ಠಾಣಾ ಸರಹದ್ದಿನಲ್ಲಿ ದಿನಾಂಕ: 14.02.2024 ರಂದು ಪಿರಾದುದಾರರು ಬಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ, ಯಾರೋ ಅವರ ಮೊಬೈಲ್ ಫೋನ್ ಕಳ್ಳತನ ಮಾಡಿರುವ ಬಗ್ಗೆ ನೀಡಿದ ದೂರಿನ ಮೇರೆಗೆ, ಹೆಚ್.ಎ.ಎಲ್ ಪೊಲೀಸ್ ಠಾಣೆಯಲ್ಲಿ ಕಳುವು ಪ್ರಕರಣವನ್ನು ದಾಖಲಿಸಲಾಗಿದೆ.

ಈ ಪ್ರಕರಣದ ತನಿಖೆಯನ್ನು ಕೈಗೊಂಡ ಪೊಲೀಸರು, ಕೃತ್ಯದಲ್ಲಿ ಭಾಗಿಯಾಗಿದ್ದ ಇಬ್ಬರು ವ್ಯಕ್ತಿಗಳನ್ನು ದಿನಾಂಕ: 14.03.2024 ರಂದು ವಶಕ್ಕೆ ಪಡೆದಿದ್ದಾರೆ. ಅವರನ್ನು ವಿಚಾರಣೆಗೆ ಒಳಪಡಿಸಿದಾಗ, 7 ಲಕ್ಷ ರೂಪಾಯಿ ಮೌಲ್ಯದ ವಿವಿಧ ಕಂಪನಿಯ ಒಟ್ಟು 20 ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಇದರಲ್ಲಿ ಹೆಚ್.ಎ.ಎಲ್ ಪೊಲೀಸ್ ಠಾಣೆಗೆ ಸಂಬಂಧಿಸಿದ ಮೂರು ಪ್ರಕರಣಗಳನ್ನು ಪತ್ತೆಹಚ್ಚಿದ್ದಾರೆ.

ವಶಪಡಿಸಿಕೊಂಡ ವ್ಯಕ್ತಿಗಳನ್ನು ಸುದೀರ್ಘವಾಗಿ ವಿಚಾರಣೆಗೆ ಒಳಪಡಿಸಿದಾಗ, ಅವರು ಬೆಂಗಳೂರು ನಗರದ ಜನನಿಬೀಡ ಬಸ್ ನಿಲ್ದಾಣಗಳಲ್ಲಿ ಬಸ್‌ಗೆ ಹತ್ತಿ, ಬಸ್‌ನಲ್ಲಿ ನೂಕು-ನೊಗ್ಗಲು ಉಂಟುಮಾಡಿ, ಸಾರ್ವಜನಿಕರ ಬ್ಯಾಗ್‌ಗಳು ಮತ್ತು ಜೇಬಿನಲ್ಲಿರುವ ಮೊಬೈಲ್‌ಗಳನ್ನು ಕಳ್ಳತನ ಮಾಡುತ್ತಿದ್ದುದನ್ನು ಹೇಳಿಕೊಂಡಿದ್ದಾರೆ. ಮೊಬೈಲ್‌ಗಳ ಸಿಮ್ ಕಾರ್ಡ್‌ಗಳನ್ನು ತೆಗೆದು, ತಮ್ಮ ಬಳಿಯಲ್ಲಿಯೇ ಇಟ್ಟುಕೊಂಡು, ನಂತರ ತಮಗೆ ಪರಿಚಯವಿರುವ ಇಬ್ಬರು ವ್ಯಕ್ತಿಗಳಿಗೆ ಮಾರಾಟ ಮಾಡುತ್ತಿದ್ದರೆಂದು ತಿಳಿದುಬಂದಿದೆ. ಇವರುಗಳು ಸಾಫ್ಟ್‌ವೇರ್ ಪ್ರಯಾಣಿಕರನ್ನು ಗುರಿಯಾಗಿಸಿಕೊಂಡು ಕೃತ್ಯವ್ಯಸಗಿದ್ದರು.

ಈ ಕಾರ್ಯಾಚರಣೆಯನ್ನು ವೈಟ್‌ಫೀಲ್ಡ್ ವಿಭಾಗದ ಉಪ ಪೊಲೀಸ್ ಆಯುಕ್ತ ಡಾ. ಶಿವಕುಮಾರ್, ಐಪಿಎಸ್ ರವರ ಮಾರ್ಗದರ್ಶನದಲ್ಲಿ, ಶ್ರೀಮತಿ ಪ್ರಯದರ್ಶಿನಿ ಈಶ್ವರ್ ಸಾಣೆಕೊಪ್ಪ, ಸಹಾಯಕ ಪೊಲೀಸ್ ಆಯುಕ್ತರು, ಮಾರತ್‌ಹಳ್ಳಿ ಉಪ ವಿಭಾಗ ರವರ ನೇತೃತ್ವದಲ್ಲಿ, ಹೆಚ್.ಎ.ಎಲ್ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಹಾಗೂ ಅಧಿಕಾರಿ/ಸಿಬ್ಬಂದಿಗಳು ಯಶಸ್ವಿಯಾಗಿ ಬೇದಿಸಿದ್ದಾರೆ.

Exit mobile version