“ಮನೆ ಮನೆಗೆ ಪೊಲೀಸ್” ಎಂಬ ವಿನೂತನ ಕಾರ್ಯಕ್ರಮದ ಅಂಗವಾಗಿ ಇಂದು ರಾಮಾಪುರ, ಹನೂರು, ಕೊಳ್ಳೇಗಾಲ ಪಟ್ಟಣ, ಯಳಂದೂರು ಹಾಗೂ ತೆರಕಣಾಂಬಿ ಠಾಣೆಗಳ ವ್ಯಾಪ್ತಿಯಲ್ಲಿ ಪೊಲೀಸ್ ಅಧಿಕಾರಿ ಸಿಬ್ಬಂದಿಗಳು ಮನೆ ಮನೆಗೆ ಭೇಟಿ ನೀಡಿ ಸುರಕ್ಷತೆ, ಭದ್ರತೆ, ಕಾನೂನು ಸುವ್ಯವಸ್ಥೆ, ಅಪರಾಧ ತಡೆ ಮುಂತಾದ ವಿಷಯಗಳ ಬಗ್ಗೆ ಜಾಗೃತಿ ಮೂಡಿಸುವುದರೊಂದಿಗೆ ಸಾರ್ವಜನಿಕರಿಂದ ಇಲಾಖೆಗೆ ಸಂಬಂಧಿಸಿದ ಅಹವಾಲು ಮತ್ತು ಸಲಹೆಗಳ ಕುರಿತು ಚರ್ಚಿಸಲಾಯಿತು.
