ಮಾನ್ಯ ಶ್ರೀ ಪ್ರದೀಪ್ ಗುಂಟಿ, ಐ.ಪಿ.ಎಸ್, ಪೊಲೀಸ್ ವರಿಷ್ಠಾಧಿಕಾರಿಗಳು, ಬೀದರ ಜಿಲ್ಲೆ ರವರ ನಿರ್ದೇಶನ ಮತ್ತು ನೇರ ಮಾರ್ಗದರ್ಶನದಂತೆ, ಜನವಾಡಾ ಪೊಲೀಸ್ ಠಾಣಾ ವ್ಯಾಪ್ತಿಯು ಮರಖಲ ಗ್ರಾಮದ ಸಾರ್ವಜನಿಕ ಸ್ಥಳದಲ್ಲಿ ಮಟಕಾ ಜೂಜಾಟದಲ್ಲಿ ತೊಡಗಿದ ಮಾಹಿತಿಯಂತೆ, ಶ್ರೀ ಬಾಷುಮಿಯಾ, ಪಿ.ಎಸ್.ಐ ರವರು ತಮ್ಮ ಅಧಿಕಾರಿ, ಸಿಬ್ಬಂದಿ ರವರೊಂದಿಗೆ ಮಟಕಾ ಚೀಟಿ ಬರೆದುಕೊಳ್ಳುತ್ತಿದ್ದವನ ಮೇಲೆ ದಾಳಿ ಮಾಡಿ ಅವನಿಂದ 740=00 ರೂಪಾಯಿ ವಶ ಪಡಿಸಿಕೊಂಡು ಆರೋಪಿತರ ವಿರುದ್ಧ ಕಾನೂನಿನ ರಿತ್ಯ ಕ್ರಮ ಕೈಕೊಳ್ಳಲಾಗಿದೆ.
ಮಟಕಾ ಜೂಜಾಟ ದಾಳಿಯಲ್ಲಿ ಶ್ರಮಿಸಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯವರ ಕಾರ್ಯಕ್ಕೆ ಶ್ಲಾಘಿಸಲಾಗಿದೆ.
ಬೀದರ ಜಿಲ್ಲೆಯಲ್ಲಿ ಅಪರಾಧ ನಿಯಂತ್ರಣಕ್ಕಾಗಿ ಜಿಲ್ಲೆಯ ಪೊಲೀಸರ ಕಾರ್ಯಾಚರಣೆಯು ಮುಂದುವರೆಯುತ್ತದೆ.



