ಮುಂಬರುವ ಚಿತ್ರದುರ್ಗ ಹಿಂದೂ ಮಹಾಗಣಪತಿಯ ಬೃಹತ್ ಶೋಭಾಯಾತ್ರೆ ಪ್ರಯುಕ್ತ ಮಾನ್ಯ ಪೊಲೀಸ್ ಅಧೀಕ್ಷಕರು ಇಂದು ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಹಿಂದೂ ಸಂಘಟನೆಯ ಮುಖಂಡರುಗಳೊಂದಿಗೆ ಹಾಗೂ ಪದಾಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ನೆಡೆಸಿ ಕೈಗೊಳ್ಳಬೇಕಾದ ಮುಂಜಾಗ್ರತ ಕ್ರಮಗಳ ಬಗ್ಗೆ ಹಾಗೂ ಹಬ್ಬದ ಆಚರಣೆ ಮತ್ತು ಶೋಭಾಯಾತ್ರೆ ಸಮಯದಲ್ಲಿ ಯಾವುದೇ ರೀತಿಯ ಆಹಿತಕರ ಘಟನೆಗಳು ನಡೆಯದಂತೆ ಕ್ರಮವಹಿಸಲು ಸೂಕ್ತ ಸೂಚನೆಗಳನ್ನು ನೀಡಿದರು.



