ಗಣೇಶ ವಿಸರ್ಜನಾ ಮೆರವಣಿಗೆಗೆ ಚಾಲನೆ ನೀಡಿದ ಪೊಲೀಸ್ ಅಧೀಕ್ಷಕರಾದ ಶ್ರೀಮತಿ ಉಮಾ ಪ್ರಶಾಂತ್ ಐಪಿಎಸ್

ಶನಿವಾರ ರಂದು ನಡೆದ ದಾವಣಗೆರೆ ನಗರದ ಹೈಸ್ಕೂಲ್ ಮೈದಾನದಲ್ಲಿನ ಹಿಂದೂ ಮಹಾ ಗಣೇಶ ವಿಸರ್ಜನಾ ಮೆರವಣಿಗೆಗೆ ಪೊಲೀಸ್ ಅಧೀಕ್ಷಕರಾದ ಶ್ರೀಮತಿ ಉಮಾ ಪ್ರಶಾಂತ್ ಐಪಿಎಸ್ ರವರು ಚಾಲನೆ ನೀಡಿದರು. ಮೆರವಣಿಗೆಯುದ್ದಕ್ಕೂ ಸಂಚರಿಸಿ ಬಂದೋಬಸ್ತ್ ಕರ್ತವ್ಯಕ್ಕೆ ನಿಯೋಜನೆಗೊಂಡ ಅಧಿಕಾರಿ ಸಿಬ್ಬಂದಿಗಳಿಗೆ ಸೂಕ್ತ ಕರ್ತವ್ಯ ಸೂಚನೆಗಳನ್ನು ನೀಡಿದರು. ಗಣೇಶ ವಿಸರ್ಜನಾ ಮೆರವಣಿಗೆ ಶಾಂತಿಯುತವಾಗಿ ಸಂಭ್ರಮದಿಂದ ಮುಕ್ತಾಯಗೊಂಡಿದ್ದು, ಎಲ್ಲಾ ಭಕ್ತಾದಿಗಳಿಗೆ ಹಾಗೂ ಸಾರ್ವಜನಿಕರಿಗೆ ಕರ್ತವ್ಯ ನಿರ್ವಹಿಸಿದ ಅಧಿಕಾರಿ ಸಿಬ್ಬಂದಿಗಳಿಗೆ ಧನ್ಯವಾದ ತಿಳಿಸಿದರು.

Related Articles

TRENDING ARTICLES