ಮಾನ್ಯ ಶ್ರೀ ಪ್ರದೀಪ್ ಗುಂಟಿ, ಐ.ಪಿ.ಎಸ್, ಪೊಲೀಸ್ ವರಿಷ್ಠಾಧಿಕಾರಿಗಳು, ಬೀದರ ಜಿಲ್ಲೆ ರವರ ನಿರ್ದೇಶನದಂತೆ ಮುಡಬಿ ಪೊಲೀಸ್ ಠಾಣೆಯ ಪಿ.ಎಸ್.ಐ ಕು. ಜಯಶ್ರೀ ರವರು ತಮ್ಮ ಸಿಬ್ಬಂದಿ ರವರೊಂದಿಗೆ ತಮ್ಮ ಠಾಣೆಯಲ್ಲಿ ಶಾಲಾ ಮಕ್ಕಳಿಗೆ ಈಗಿನಿಂದಲೇ ಕಾನೂನಿನ ಬಗ್ಗೆ ಅರಿವು ಮೂಡಿಸಿದ್ದಲ್ಲಿ ಉತ್ತಮವಾದ ಸಮಾಜವನ್ನು ರೂಪಿಸುವಲ್ಲಿ ಕೊಡುಗೆ ನೀಡುವವರಾಗಿದ್ದರಿಂದ ಮಕ್ಕಳಿಗೆ ಕಾನೂನುಗಳ ಬಗ್ಗೆ, ಸಂಚಾರ ನಿಯಮ, ಪೊಕ್ಸೊ, ಜೆ.ಜೆ ಕಾಯ್ದೆ ಹಾಗೂ ಇತರೆ ಕಾನೂನಿನ ಬಗ್ಗೆ ಮತ್ತು ಪೊಲೀಸ್ ಕಾರ್ಯ ವೈಖರಿ ಬಗ್ಗೆ ಮಕ್ಕಳಲ್ಲಿ ಅರಿವು ಮೂಡಿಸಿರುತ್ತಾರೆ. ಮಕ್ಕಳಿಗೆ ಉತ್ತಮ ಜ್ಞಾನವನ್ನು ಮೂಡಿಸುವ ಮಹತ್ವದ ಕಾರ್ಯದಲ್ಲಿ ತೊಡಗಿದ ಪೊಲೀಸ್ ಅಧಿಕಾರಿ, ಸಿಬ್ಬಂದಿರವರ ಕಾರ್ಯಕ್ಕೆ ಶ್ಲಾಘಿಸಲಾಗಿದೆ.


































