ರಾಮ್ ಎಲ್ ಅರಸಿದ್ದಿ IPS Superintendent of Police ರವರು ಕೊಪ್ಪಳ ಜಿಲ್ಲೆಯ ಕುಷ್ಟಗಿ ಪೊಲೀಸ್ ಠಾಣೆಗೆ ಭೇಟಿ ನೀಡಿ ಸಿಬ್ಬಂದಿಯವರ ಕುಂದು ಕೊರತೆ ಆಲಿಸಿ ಮನೆ ಮನೆಗೆ ಪೊಲೀಸ್ ಬೇಟಿ ಮತ್ತು ಮುಂಬರುವ ಗಣೇಶ್ ಹಬ್ಬದ ಬಂದೋಬಸ್ತ್ ಕುರಿತು ಸೂಕ್ತ ಸಲಹೆ ಸೂಚನೆಗಳನ್ನು ನೀಡಲಾಯಿತು.







ರಾಮ್ ಎಲ್ ಅರಸಿದ್ದಿ IPS Superintendent of Police ರವರು ಕೊಪ್ಪಳ ಜಿಲ್ಲೆಯ ಕುಷ್ಟಗಿ ಪೊಲೀಸ್ ಠಾಣೆಗೆ ಭೇಟಿ ನೀಡಿ ಸಿಬ್ಬಂದಿಯವರ ಕುಂದು ಕೊರತೆ ಆಲಿಸಿ ಮನೆ ಮನೆಗೆ ಪೊಲೀಸ್ ಬೇಟಿ ಮತ್ತು ಮುಂಬರುವ ಗಣೇಶ್ ಹಬ್ಬದ ಬಂದೋಬಸ್ತ್ ಕುರಿತು ಸೂಕ್ತ ಸಲಹೆ ಸೂಚನೆಗಳನ್ನು ನೀಡಲಾಯಿತು.







ಚಿತ್ರದುರ್ಗ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಮಾನ್ಯ ಪೊಲೀಸ್ ಅಧೀಕ್ಷಕರಾದ ಶ್ರೀ ರಂಜಿತ್ ಕುಮಾರ ಬಂಡಾರು ಐಪಿಎಸ್ ರವರು ಠಾಣೆ/ಕಚೇರಿಯ ವಿವಿಧ ವಿಭಾಗಗಳಲ್ಲಿ ಉತ್ತಮವಾದ ಕರ್ತವ್ಯವನ್ನು ನಿರ್ವಹಿಸಿದಂತಹ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಪ್ರಶಂಸನಾ ಪತ್ರ ನೀಡುವ ಮೂಲಕ ಅಭಿನಂದಿಸಿ ಇದೇ ರೀತಿ ಉತ್ತಮ ರೀತಿಯಲ್ಲಿ ಕರ್ತವ್ಯ ನಿರ್ವಹಿಸುವಂತೆ ತಿಳಿಸಿದರು.


ಜಿಲ್ಲಾ ಸಶಸ್ತ್ರ ಮೀಸಲು ಪಡೆ ಮಲ್ಲಸಮುದ್ರದ ಕವಾಯತು ಮೈದಾನದಲ್ಲಿ ವಾರದ ಕವಾಯತು ನಡೆಸಿ, ಗೌರವ ವಂದನೆ ಸ್ವೀಕರಿಸಿ, ತುಕಡಿಗಳ ಪರಿವೀಕ್ಷಣೆ ಮಾಡಲಾಯಿತು ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದ ಅಧಿಕಾರಿ ಮತ್ತು ಸಿಬ್ಬಂದಿರವರಿಗೆ ಪ್ರಶಂಸನಾ ಪತ್ರ ನೀಡಿ ಉತ್ತಮ ಕಾರ್ಯಗಳನ್ನು ಶ್ಲಾಘಿಸಲಾಯಿತು ಈ ಕಾಲಕ್ಕೆ ಅಧಿಕಾರಿ ಮತ್ತು ಸಿಬ್ಬಂದಿರವರ ಕುಂದುಕೊರತೆಗಳನ್ನು ಆಲಿಸಿ ಪರಿಹಾರ ಕ್ರಮಗಳ ಬಗ್ಗೆ ಚರ್ಚೆ ನಡೆಸಲಾಯಿತು ಇದೇ ಸಂದರ್ಭದಲ್ಲಿ , ನಗದು ಹೊಂದಿರುವ ಬ್ಯಾಗ್ನ್ನು ಪ್ರಯಾಣಿಕರಿಗೆ ಸುರಕ್ಷಿತವಾಗಿ ತಲುಪಿಸಿ ನಾಗರಿಕ ಪ್ರಜ್ಞೆಯನ್ನು ಮೆರೆದ ಆಟೋ ಚಾಲಕ ಶ್ರೀ ಸೈಯದ್ ಹುಸೇನ್ ಮುಲ್ಲಾ ರವರಿಗೆ “ಸಮುದಾಯ ರಕ್ಷಕ ಪ್ರಶಂಸನಾ ಪತ್ರ” ನೀಡಿ ಗೌರವಿಸಲಾಯಿತು.







ಕೋಲಾರ ಜಿಲ್ಲಾ ಪೊಲೀಸ್ ವತಿಯಿಂದ ಪ್ರತಿ ದಿನ ಅಧಿಕಾರಿ ಸಿಬ್ಬಂದಿಗಳು ಅಪರಾಧ ತಡೆಯುವ ನಿಟ್ಟಿನಲ್ಲಿ ದೈನಂದಿನ ಕರ್ತವ್ಯದೊಂದಿಗೆ ನಗರದಲ್ಲಿ ರಾತ್ರಿ ವಿಷೇಶ ಗಸ್ತು ಕರ್ತವ್ಯವನ್ನು ಕೈಗೊಂಡು ಪ್ರಮುಖ ಸಾರ್ವಜನಿಕ ಸ್ಥಳಗಲಾದ ದೇವಸ್ಥಾನ, ಮಸೀದಿ, ಬಸ್ ನಿಲ್ದಾಣ, ಲಾಡ್ಜ್ ಗಳಿಗೆ ಭೇಟಿ ನೀಡಿ ಹಾಗೂ ಸಂಶಯಾಸ್ಪದ ವ್ಯಕ್ತಿಗಳನ್ನು ಮತ್ತು ATM, ಮತ್ತು ವಾಹನಗಳನ್ನು ಪರಿಶೀಲಿಸಿ ಕಾನೂನು ಕ್ರಮ ಕೈಗೊಳ್ಳಲಾಗಿರುತ್ತದೆ.





ಕೋಲಾರ ಜಿಲ್ಲೆಯ ಕೋಲಾರ ನಗರ, ಸೆನ್ ಮತ್ತು ಮಾಲೂರು ಪೊಲೀಸ್ ಠಾಣೆಗಳಲ್ಲಿ ಸಾರ್ವಜನಿಕರು ತಮ್ಮ ಮೊಬೈಲ್ ಫೋನ್ ಗಳು ಕಳುವಾಗಿರುವ ಬಗ್ಗೆ ದೂರು ನೀಡಿದ್ದು ಅದರಂತೆ ಸಿ. ಇ. ಐ.ಅರ್ ಪೋರ್ಟೆಲ್ ಮೂಲಕ ಕಳುವಾಗಿದ್ದ ಮೊಬೈಲ್ಗಳನ್ನು ಪತ್ತೆ ಮಾಡಿ ಮಾಲೀಕರಿಗೆ ಹಸ್ತಾಂತರಿಸಲಾಯಿತು.




ಮಹಿಳಾ ಪೊಲೀಸ್ ಠಾಣೆಗೆ ಶಾಲಾ ಮಕ್ಕಳನ್ನು ಬರಮಾಡಿಕೊಂಡು “ತೆರೆದ ಮನೆ” ಕಾರ್ಯಕ್ರಮದ ಅಂಗವಾಗಿ ಶಾಲಾ ಮಕ್ಕಳಿಗೆ ಪೊಲೀಸ್ ಠಾಣೆಯ ದೈನಂದಿನ ಕರ್ತವ್ಯ , ಪೊಲೀಸರ ಕಾರ್ಯವೈಕರಿ ಹಾಗೂ ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆಯ ಬಗ್ಗೆ ಅರಿವು ಮೂಡಿಸಲಾಯಿತು.




ದಿನಾಂಕ:06-08-2025ರಂದು ಗದಗ ಜಿಲ್ಲಾ ಪೊಲೀಸ್ ವತಿಯಿಂದ ಗದಗ-ಬೆಟಗೇರಿ ಸಂಚಾರ ಪೊಲೀಸ್ ಠಾಣೆಯ ಅಧಿಕಾರಿ ಸಿಬ್ಬಂದಿರವರು ಗದಗ ನಗರದಲ್ಲಿ ವಿಶೇಷ ಕಾರ್ಯಚರಣೆ ಮಾಡಿ ದೋಷಪೂರ್ಣ ನಂಬರ್ ಪ್ಲೇಟ್ (Defective Number Plate) ಹೊಂದಿರುವ ಒಟ್ಟು 56 ಬೈಕ್ ಗಳನ್ನು ಸೀಜ್ ಮಾಡಿದ್ದು, ಅದರಲ್ಲಿ 37 ಬೈಕ್ ಗಳ ಮೇಲೆ 18500/- ರೂ ದಂಡವನ್ನು, 26 ಬೈಕ್ ಗಳ ಮೇಲೆ 14500/- ರೂ ಥರ್ಡ್-ಐ ದಂಡವನ್ನು ಉಳಿದಂತೆ 20 ಬೈಕ್ ಗಳ ಮೇಲೆ ಕಾನೂನು ರೀತಿ ದಂಡವನ್ನು ವಿಧಿಸಲಾಗಿರುತ್ತದೆ.

ಮುಧೋಳ ಪೊಲೀಸ್ ಠಾಣೆಯಲ್ಲಿ ‘ತೆರೆದ ಬಾಗಿಲು’ ಕಾರ್ಯಕ್ರಮದ ಅಂಗವಾಗಿ ರನ್ನ ಪ್ರಾಥಮಿಕ ಹಾಗೂ ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ಕಾನೂನು ಅರಿವು ಮೂಡಿಸಲಾಯಿತು.


ಚಿಕ್ಕಮಗಳೂರು ಜಿಲ್ಲೆಯ ಕೇಂದ್ರ ಸ್ಥಾನದಲ್ಲಿರುವ ಪೊಲೀಸ್ ಕವಾಯತು ಮೈದಾನದಲ್ಲಿ ಚಿಕ್ಕಮಗಳೂರು ಮತ್ತು ತರೀಕೆರೆ ಉಪವಿಭಾಗದ ಪೊಲೀಸ್ ಅಧಿಕಾರಿ ಸಿಬ್ಬಂದಿಗಳಿಗೆ ಹಾಗೂ ಕೊಪ್ಪದಲ್ಲಿ ಕೊಪ್ಪ ಉಪವಿಭಾಗದ ಪೊಲೀಸ್ ಅಧಿಕಾರಿ ಸಿಬ್ಬಂದಿಗಳಿಗೆ ಇಂದು ವಾರದ ಕವಾಯತು ನಡೆಸಲಾಯಿತು. ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಶಿಸ್ತು ಮತ್ತು ಆರೋಗ್ಯ ಕಾಪಾಡಿಕೊಳ್ಳಲು, ಪ್ರಾಮಾಣಿಕ ಕರ್ತವ್ಯ ನಿರ್ವಹಣೆ, ಸಾರ್ವಜನಿಕರಿಗೆ ಉತ್ತಮ ಸೇವೆ ನೀಡಲು ಸೂಕ್ತ ಸಲಹೆ ಮತ್ತು ಸೂಚನೆಗಳನ್ನು ನೀಡಲಾಯಿತು.

“ಪೊಲೀಸ್ ಅಂದರೆ ಭಯವಲ್ಲ, ಭರವಸೆ” ಎಂಬ ಸಂದೇಶದೊಂದಿಗೆ ಮಹಿಳಾ ಪೊಲೀಸ್ ಠಾಣೆಯಲ್ಲಿ ನಡೆದ ತೆರೆದ ಮನೆ ಕಾರ್ಯಕ್ರಮದ ಅಂಗವಾಗಿ, ಶಾಲಾ ಮಕ್ಕಳಿಗೆ ಪೊಲೀಸ್ ಜೊತೆ ಸಂವಹನ ಮತ್ತು ಸಹಕಾರ, 112 ತುರ್ತು ಸಹಾಯವಾಣಿ, 1930 ಸೈಬರ್ ಅಪರಾಧ ಸಹಾಯವಾಣಿ, 1098 ಮಕ್ಕಳ ಸಹಾಯವಾಣಿ, ಪೋಕ್ಸೋ ಕಾಯ್ದೆಯ ಕುರಿತು, ಸಾಮಾನ್ಯ ಕಾನೂನು ಹಾಗೂ ಠಾಣೆಯ ಕಾರ್ಯವೈಖರಿ ಬಗ್ಗೆ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

