ಚಿಂತಾಮಣಿ ನಗರದಲ್ಲಿ ”ಮನೆ ಮನೆಗೆ ಪೊಲೀಸ್”

0

ಚಿಂತಾಮಣಿ ನಗರ ಠಾಣೆಯ ಪೊಲೀಸರು ಠಾಣಾ ವ್ಯಾಪ್ತಿಯ ಮನೆಗಳಿಗೆ ಭೇಟಿ ನೀಡಿ, ಹೊಸ ಬೀಟ್ ವ್ಯವಸ್ಥೆಯಾದ ”ಮನೆ ಮನೆಗೆ ಪೊಲೀಸ್” ಕಾರ್ಯಕ್ರಮದ ಬಗ್ಗೆ ಜನರಿಗೆ ಮಾಹಿತಿಯನ್ನು ನೀಡಿದ್ದು, ಪೋಕ್ಸೋ ಕಾಯ್ದೆ, ಬಾಲ್ಯ ವಿವಾಹ ನಿಷೇಧ ಕಾಯ್ದೆ, ಸೈಬರ್ ಅಪರಾಧಗಳು ಹಾಗೂ ತುರ್ತು ಸಹಾಯವಾಣಿಗಳ ಬಗ್ಗೆ ಅರಿವು ಮೂಡಿಸಿರುತ್ತಾರೆ.

ಕೋಲಾರ ಜಿಲ್ಲಾ ಪೊಲೀಸ್‌ ವತಿಯಿಂದ ನಗರದಲ್ಲಿ ರಾತ್ರಿ ವಿಷೇಶ ಗಸ್ತು

0

ಕೋಲಾರ ಜಿಲ್ಲಾ ಪೊಲೀಸ್‌ ವತಿಯಿಂದ ಪ್ರತಿ ದಿನ ಅಧಿಕಾರಿ ಸಿಬ್ಬಂದಿಗಳು ಅಪರಾಧ ತಡೆಯುವ ನಿಟ್ಟಿನಲ್ಲಿ ದೈನಂದಿನ ಕರ್ತವ್ಯದೊಂದಿಗೆ ನಗರದಲ್ಲಿ ರಾತ್ರಿ ವಿಷೇಶ ಗಸ್ತು ಕರ್ತವ್ಯವನ್ನು ಕೈಗೊಂಡು ಪ್ರಮುಖ ಸಾರ್ವಜನಿಕ ಸ್ಥಳಗಲಾದ ದೇವಸ್ಥಾನ, ಮಸೀದಿ, ಬಸ್ ನಿಲ್ದಾಣ, ಲಾಡ್ಜ್ ಗಳಿಗೆ ಭೇಟಿ ನೀಡಿ ಹಾಗೂ ಸಂಶಯಾಸ್ಪದ ವ್ಯಕ್ತಿಗಳನ್ನು ಮತ್ತು ATM, ಮತ್ತು ವಾಹನಗಳನ್ನು ಪರಿಶೀಲಿಸಿ ಕಾನೂನು ಕ್ರಮ ಕೈಗೊಳ್ಳಲಾಗಿರುತ್ತದೆ.

ಕಾಲೇಜು ವಿದ್ಯಾರ್ಥಿಗಳಿಗೆ ಸಂಚಾರ ಜಾಗೃತಿ ಉಪನ್ಯಾಸ

0

ಸಂಚಾರ ಜಾಗೃತಿ ಮತ್ತು ಸುರಕ್ಷತಾ ನಿಯಮಗಳ ಮೇಲೆ ಕೇಂದ್ರೀಕರಿಸಿ ಸುಗಮ ಸಂಚಾರ ಮತ್ತು ರಸ್ತೆ ಸುರಕ್ಷತೆಯ ಬಗ್ಗೆ ಅರಿವು ಮೂಡಿಸುವ ಗುರಿಯೊಂದಿಗೆ ಸಂಚಾರ ನಿರ್ವಹಣಾ ಕೇಂದ್ರದಲ್ಲಿ ಈಸ್ಟ್ ವೆಸ್ಟ್ ಕಾಲೇಜು ವಿದ್ಯಾರ್ಥಿಗಳಿಗೆ ಉಪನ್ಯಾಸ ನೀಡಿದರು.

ಪೊಲೀಸ್ ಅಧೀಕ್ಷಕರ ನೇತೃತ್ವದಲ್ಲಿ ಗಣಪತಿ ಮತ್ತು ಈದ್-ಮೀಲಾದ್ ಹಬ್ಬದ ಪ್ರಯುಕ್ತ ಸಭೆ

0

ದಿನಾಂಕ: 05.08.2025 ರಂದು ಮಾನ್ಯ ಪೊಲೀಸ್ ಅಧೀಕ್ಷಕರ ನೇತೃತ್ವದಲ್ಲಿ ಸ್ಥಳಿಯ ಪೊಲೀಸ್ ಅಧಿಕಾರಿಗಳೊಂದಿಗೆ ಹಮ್ಮಿಕೊಂಡಿದ್ದ ಸಭೆಯಲ್ಲಿ ಮುಂಬರುವ ಹಿಂದೂ ಮಹಾಗಣಪತಿ ಮತ್ತು ಈದ್-ಮೀಲಾದ್ ಹಬ್ಬಗಳು ಹಾಗೂ ಹಿಂದೂ ಮಹಾ ಗಣಪತಿ ಶೋಭಾಯಾತ್ರೆ ಪ್ರಯುಕ್ತ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಲಾಯಿತು.

ಉಡುಪಿ ಜಿಲ್ಲೆಯಲ್ಲಿ “ಮನೆ ಮನೆಗೆ ಪೊಲೀಸ್”

0

ಮಲ್ಪೆ ಪೊಲೀಸ್ ಠಾಣ ವ್ಯಾಪ್ತಿಯ ಅಂಬಲ್ಪಾಡಿ ಗ್ರಾಮಪಂಚಾಯತಿ ಕಿದಿಯೂರು ಗ್ರಾಮದ ಕಪ್ಪೆಟ್ಟು ವಾರ್ಡ್ ನ ದೇವಿ ಸಭಾ ಭವನ ದಲ್ಲಿ ಮನೆ ಮನೆ ಪೊಲೀಸ್ ಭೇಟಿ ಕಾರ್ಯಕ್ರಮ ಹಾಗೂ ರಾತ್ರಿ ಕಳ್ಳತನ ನಡೆಯುವುದನ್ನು ತಡೆಗಟ್ಟಲು ಸೆಕ್ಯೂರಿಟಿ ಗಾರ್ಡ್ ನೇಮಕ ಮಾಡುವ ಬಗ್ಗೆ ದೃಷ್ಟಿ ಯೋಜನೆ ಯನ್ನು ಪ್ರಾರಂಭಿಲಾಯಿತು. ಈ ಸಮಯ ಮಾನ್ಯ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀ ಹರಿರಾಮ್ ಶಂಕರ್ IPS ,ಉಪ ವಿಭಾಗದ DYSP ಹಾಗೂ ಮಲ್ಪೆ‌ ವೃತ್ತದ CPI ಮಲ್ಪೆ ಪೊಲೀಸ್ ಠಾಣಾ PSIರವರು ಹಾಜರಿದ್ದರು.

ಚಾಮರಾಜನಗರ ಜಿಲ್ಲೆಯಲ್ಲಿ “ಮನೆ ಮನೆಗೆ ಪೊಲೀಸ್”

0

“ಮನೆ ಮನೆಗೆ ಪೊಲೀಸ್” ಎಂಬ ವಿನೂತನ ಕಾರ್ಯಕ್ರಮದ ಅಂಗವಾಗಿ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಯವರು ಇಂದು ಕೊಳ್ಳೇಗಾಲ ಪಟ್ಟಣ ಹಾಗೂ ಹನೂರು ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಮನೆಗಳಿಗೆ ಭೇಟಿ ನೀಡಿ ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆ, ಸೈಬರ್ ಅಪರಾಧ, ಬಾಲ್ಯವಿವಾಹ, ಕಾನೂನು ಮತ್ತು ಸುವ್ಯವಸ್ಥೆ, ಅಪರಾಧ ತಡೆಗಟ್ಟುವಿಕೆ ಮುಂತಾದ ವಿಷಯಗಳ ಕುರಿತು ಮಾಹಿತಿಯನ್ನು ಸಂಗ್ರಹಿಸಿ ಮತ್ತು ಸಾರ್ವಜನಿಕರಿಂದ ಇಲಾಖೆಗೆ ಸಂಬಂಧಿಸಿದ ಕುಂದುಕೊರತೆಗಳನ್ನು ಆಲಿಸಿ ಜಾಗೃತಿ ಮೂಡಿಸಿರುತ್ತಾರೆ

ಭಾರತ್ ಗ್ಯಾಸ್ ಸಿಲಿಂಡರ್ ಕಳ್ಳತನ ಪ್ರಕರಣ ಭೇದಿಸಿದ ಸವಣೂರು ಪೊಲೀಸರು

0

ಹಾವೇರಿ : ಸವಣೂರು ಪೊಲೀಸರು ಮನ್ನಂಗಿ ಗ್ರಾಮದ ಭಾರತ್ ಗ್ಯಾಸ್ ಏಜೆನ್ಸಿಯ ಗೋಡೌನ್ ನಲ್ಲಿ ಸಂಗ್ರಹಿಸಿಟ್ಟಿದ್ದ ಸಿಲಿಂಡರ್ ಗಳ ಕಳ್ಳತನಕ್ಕೆ ಸಂಭಂಧಸಿದಂತೆ ಆರೋಪಿತರನ್ನು ಪತ್ತೆ ಮಾಡಿ ಒಟ್ಟು 2,27,800 ರೂ ಬೆಲೆಯ 134 ಖಾಲಿ ಸಿಲಿಂಡರಗಳು, ಕೃತ್ಯಕ್ಕೆ ಬಳಸಿದ ವಾಹವನ್ನು ವಶಕ್ಕೆ ಪಡೆದಿರುತ್ತಾರೆ.

ಮೈಸೂರಿನಲ್ಲಿ ಪೊಲೀಸ್ ತಪಾಸಣೆ

0

ನಿನ್ನೆ ದಿನಾಂಕ 05-08-2025 ರಾತ್ರಿ ಮೈಸೂರು ನಗರದ ವಿಜಯನಗರ ಉಪ ವಿಭಾಗದ ಪೊಲೀಸ್ ಠಾಣಾ ವ್ಯಾಪ್ತಿ ಪ್ರದೇಶದಲ್ಲಿ ಕಂಡುಬರುವ ಬಾರ್ ಮತ್ತು ರೆಸ್ಟೋರೆಂಟ್ ಗಳಲ್ಲಿ ಪೊಲೀಸ್ ಅಧಿಕಾರಿಗಳು ಸಿಬ್ಬಂದಿಗಳೊಂದಿಗೆ ತಪಾಸಣೆ ನಡೆಸಿದರು.

ಮನೆ ಕಳ್ಳತನದ ಪ್ರಕರಣ ಭೇದಿಸಿದ ಬೈಲಹೊಂಗಲ ಪೊಲೀಸರು

0

ಮನೆ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ಬೈಲಹೊಂಗಲ ಠಾಣಾ ಪೊಲೀಸರು ಆರೋಪಿಯೊಬ್ಬನನ್ನು ಬಂಧಿಸಿದ್ದು, ಆತನಿಂದ ಬೈಲಹೊಂಗಲ & ನೇಸರಗಿ ಠಾಣಾ ವ್ಯಾಪ್ತಿಯ 2 ಮನೆಗಳಲ್ಲಿ ಕಳ್ಳತನವಾಗಿದ್ದ 70 ಗ್ರಾಂ ಬಂಗಾರ, 30 ಗ್ರಾಂ ಬೆಳ್ಳಿಯ ಆಭರಣಗಳನ್ನು ವಶಪಡಿಸಿಕೊಂಡಿದ್ದಾರೆ.

ಗೃಹ ಸಚಿವ ಡಾ. ಜಿ. ಪರಮೇಶ್ವರ ಜನ್ಮ ದಿನದ ಪ್ರಯುಕ್ತ ದಂಪತಿ ಸಮೇತ ತಿರುಪತಿಗೆ ಭೇಟಿ

0

ಮಾನ್ಯ ಗೃಹ ಸಚಿವರಾದ ಡಾ. ಜಿ.ಪರಮೇಶ್ವರ ಅವರು ಇಂದು ಜನ್ಮ ದಿನದ ಪ್ರಯುಕ್ತ ದಂಪತಿ ಸಮೇತವಾಗಿ ವಿಶ್ವಪ್ರಸಿದ್ಧ ತಿರುಪತಿ ಸುಕ್ಷೇತ್ರಕ್ಕೆ ಭೇಟಿ ನೀಡಿ, ಶ್ರೀ ವೆಂಕಟೇಶ್ವರ ಸ್ವಾಮಿಯ ದರ್ಶನ ಪಡೆದರು.

ಟಿಟಿಡಿ ಸದಸ್ಯರಾದ ದರ್ಶನ್, ವಿಧಾನ ಪರಿಷತ್ ಸದಸ್ಯರಾದ ರಾಮೋಜಿಗೌಡ, ವಿಧಾನ ಪರಿಷತ್‌ನ ಮಾಜಿ ಸದಸ್ಯ ಎಂ.ಸಿ.ವೇಣುಗೋಪಾಲ್ ಮುಂತಾದವರು ಇದ್ದರು.