ಪೀಕ್-ಅವರ್ ಸಂಚಾರ ದಟ್ಟಣೆ ಟ್ರಾಫಿಕ್ ಜಂಟಿ ಪೊಲೀಸ್ ಆಯುಕ್ತರು…!

0

ಸದಾಶಿವನಗರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಮೇಖ್ರಿ ಸರ್ಕಲ್‌ಗೆ ಭೇಟಿ ನೀಡಿ, ಅಲ್ಲಿನ ಪೀಕ್-ಅವರ್ ಸಂಚಾರ ದಟ್ಟಣೆಯ ಸ್ಥಿತಿ-ಗತಿಯನ್ನು ಪರಿಶೀಲಿಸಲಾಯಿತು. ಮತ್ತು ಸ್ಥಳೀಯ ಟ್ರಾಫಿಕ್ ತಂಡದೊಂದಿಗೆ ಚರ್ಚಿಸಿ, ದಟ್ಟಣೆಯನ್ನು ತಗ್ಗಿಸಲು ಮತ್ತು ಪ್ರಯಾಣಿಕರಿಗೆ ಸುಗಮ ಸಂಚಾರವನ್ನು ಖಚಿತಪಡಿಸಲು ಕ್ರಮಗಳನ್ನು ಚರ್ಚಿಸಲಾಯಿತು.

ಬೀದರ ಜಿಲ್ಲಾ ಪೊಲೀಸ್ ಅಧೀಕ್ಷಕರ ಕಛೇರಿಗೆ ಹಿರಿಯ ಅಧಿಕಾರಿಗಳ ಭೇಟಿ

0

ಶ್ರೀ ಗಣೇಶ ಹಬ್ಬದ ಪ್ರಯುಕ್ತ ಮೇಲ್ವಿಚಾರಣೆ ಸಲುವಾಗಿ ಬೀದರ ಜಿಲ್ಲಾ ಪೊಲೀಸ್ ಅಧೀಕ್ಷಕರ ಕಛೇರಿಗೆ ಹಿರಿಯ ಅಧಿಕಾರಿಗಳ ಭೇಟಿ, ಅಧಿಕಾರಿ ಮತ್ತು ಸಿಬ್ಬಂದಿ ರವರಿಗೆ ಸಲಹೆ ಸೂಚನೆಗಳು.

ಸನ್ಮಾನ್ಯ ಶ್ರೀ ಎನ್ ಸತೀಶ್ ಕುಮಾರ, ಐ.ಪಿ.ಎಸ್, ಮಾನ್ಯ ಪೊಲೀಸ್ ಮಹಾನೀರಿಕ್ಷಕರು, ಕೇಂದ್ರ ಸ್ಥಾನ-01, ಕೇಂದ್ರ ಕಛೇರಿ ಬೆಂಗಳೂರು ರವರು ಜಿಲ್ಲಾ ಪೊಲೀಸ್ ಅಧೀಕ್ಷಕರ ಕಛೇರಿಗೆ ಭೇಟಿ ನೀಡಿ, ಶ್ರೀ ಗಣೇಶ ಹಬ್ಬದ ನಿಮಿತ್ಯ ಬಂದೋಬಸ್ತ ಕೈಕೊಂಡ ಯೋಜನೆಗಳ ಮತ್ತು ಬ/ಬ ಕರ್ತವ್ಯದ ಪ್ರಗತಿ ಪರಿಶೀಲನೆ ನಡೆಸಿ, ಬಂದೋಬಸ್ತ ವಿಷಯಗಳ ಬಗ್ಗೆ ಚರ್ಚಸಿ ಕಾನೂನು ಸುವ್ಯವಸ್ಥೆ ಕಾಪಾಡಿಕೊಂಡು ಹೊಗುವಂತೆ ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು. ನಂತರ ಕಛೇರಿಯಲ್ಲಿಅಳವಡಿಸಿರುವ AI CCTV COMMAND & CONTROL CENTRE ಗೆ ಭೇಟಿ ನೀಡಿ ವಿಕ್ಷಣೆ ಮಾಡಿ ಪ್ರಶಂಸಿಸಿರುತ್ತಾರೆ.

ಮಾನ್ಯರು ಶ್ರೀ ಗಣೇಶ ಹಬ್ಬದ ಬಂದೋಬಸ್ತ ಕುರಿತು ತಮ್ಮ ಅಮೂಲ್ಯವಾದ ಸಲಹೆ ಮತ್ತು ಸೂಚನೆಗಳನ್ನು ನೀಡಿದ್ದು, ಮಾನ್ಯರ ಸಲಹೆ ಮತ್ತು ಸೂಚನೆಗಳನ್ನು ತಪ್ಪದೇ ಪಾಲನೆ ಮಾಡಲಾಗುವುದು. ಮಾನ್ಯರು ಜಿಲ್ಲಾ ಪೊಲೀಸ್ ಕಛೇರಿಗೆ ಭೇಟಿ ನೀಡಿದಕ್ಕೆ ಸಮಸ್ತ ಜಿಲ್ಲಾ ಪೊಲೀಸರಿಂದ ಧನ್ಯವಾದಗಳು.

ಮೈಸೂರು ನಗರದಲ್ಲಿ ಪೋಲೀಸರ ವಿಶೇಷ ಗಸ್ತು

0

ಕೃಷ್ಣರಾಜ ಉಪ ವಿಭಾಗದ ಎಲ್ಲಾ ಪೊಲೀಸ್ ಠಾಣಾ ವ್ಯಾಪ್ತಿ ಪ್ರದೇಶಗಳಲ್ಲಿ ಗಣೇಶ ಹಬ್ಬದ ಪ್ರಯುಕ್ತ ನಗರದ ವಿವಿಧ ಸ್ಥಳಗಳಲ್ಲಿ ಗಣೇಶ ಪ್ರತಿಷ್ಠಾಪಿಸಿದ್ದು, ಈ ಸ್ಥಳಗಳಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ನಿಗಾವಹಿಸಲು ಪೊಲೀಸ್ ಠಾಣೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳೊಂದಿಗೆ ಕಾಲ್ನಡಿಗೆ ಮೂಲಕ ವಿಶೇಷ ಗಸ್ತು ಮಾಡಿರುತ್ತಾರೆ.

ತಿಪಟೂರು ನಗರದಲ್ಲಿ ಸೌಹಾರ್ದ ಸಭೆ

0

ತಿಪಟೂರು ನಗರದಲ್ಲಿ ಗಣಪತಿ ವಿಸರ್ಜನಾ ಕಾರ್ಯಕ್ರಮ ಹಾಗೂ ಈದ್ ಮಿಲಾದ್ ಹಬ್ಬದ ಹಿನ್ನಲೆಯಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಶ್ರೀ ಪುರುಷೋತ್ತಮ್ ಎಂ.ಎಲ್ ಹಾಗೂ ಎ.ಎಸ್.ಪಿ ತಿಪಟೂರು ರವರ ಸಮ್ಮುಖದಲ್ಲಿ ಸೌಹಾರ್ದ ಸಭೆಯನ್ನು ನಡೆಸಲಾಯಿತು. ಸಭೆಯಲ್ಲಿ ಶಾಸಕರಾದ ಶ್ರೀ ಷಡಕ್ಷರಿ ರವರು ಮತ್ತು ಎ.ಸಿ ತಿಪಟೂರು ರವರು ಹಾಗೂ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ಉಡುಪಿ ಜಿಲ್ಲೆಯಲ್ಲಿ ವಿದ್ಯಾರ್ಥಿಗಳಿಗೆ ಮಾದಕ ದ್ರವ್ಯ ಗಳ ಬಗ್ಗೆ ಜಾಗೃತಿ ಕಾರ್ಯಕ್ರಮ

0

ಬೈಂದೂರು ಪೊಲೀಸ್ ಠಾಣಾ ವ್ಯಾಪ್ತಿಯ ಸರ್ಕಾರಿ ಪದವಿ ಪೂರ್ವ ಕಾಲೇಜ್ ಕಂಬದಕೋಣೆ ಇಲ್ಲಿನ ವಿದ್ಯಾರ್ಥಿಗಳಿಗೆ ಮಾದಕ ದೃವ್ಯ ಜಾಗೃತಿ ಸಭೆ ಹಾಗೂ ವಿದ್ಯಾರ್ಥಿಗಳ ಡ್ರಗ್ಸ್ ಕಮಿಟಿ ಸಭೆ ನಡೆಸಿ ವಿದ್ಯಾರ್ಥಿಗಳಿಗೆ ಮಾದಕ ದೃವ್ಯ ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಮಾಹಿತಿ ನೀಡಲಾಯಿತು.

ವಿದ್ಯಾರ್ಥಿಗಳಿಗೆ ಸಂಚಾರ ನಿಯಮಗಳ ಜಾಗೃತಿ

0

ಆರ್ಕಿಡ್ ಇಂಟರ್ನ್ಯಾಷನಲ್ ಸ್ಕೂಲ್ ರಾಜಾಜಿನಗರದ ವಿದ್ಯಾರ್ಥಿಗಳು ಸಂಚಾರ ನಿರ್ವಹಣಾ ಕೇಂದ್ರಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ, ಬೆಂಗಳೂರು ನಗರದ ಸಂಚಾರ ನಿರ್ವಹಣಾ ಕೇಂದ್ರದ ಅಸಿಸ್ಟಂಟ್ ಪೊಲೀಸ್ ಸಬ್-ಇನ್ಸ್ಪೆಕ್ಟರ್ ರವರು , ಸಂಚಾರ ನಿಯಮಗಳು ಮತ್ತು ಅಳವಡಿಸಿಕೊಳ್ಳಬೇಕಾದ ರಸ್ತೆ ಸುರಕ್ಷತಾ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು.

ಮೈಸೂರು ಪೋಲೀಸರ ವಿಶೇಷ ಗಸ್ತು

0

ದೇವರಾಜ ಉಪವಿಭಾಗ & ನರಸಿಂಹರಾಜ ಉಪವಿಭಾಗದ ಎಲ್ಲಾ ಪೊಲೀಸ್ ಠಾಣಾ ವ್ಯಾಪ್ತಿ ಪ್ರದೇಶಗಳಲ್ಲಿ ಗಣೇಶ ಹಬ್ಬದ ಪ್ರಯುಕ್ತ ನಗರದ ವಿವಿಧ ಸ್ಥಳಗಳಲ್ಲಿ ಗಣೇಶ ಪ್ರತಿಷ್ಠಾಪಿಸಿದ್ದು, ಈ ಸ್ಥಳಗಳಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ನಿಗಾವಹಿಸಲು ಪೊಲೀಸ್ ಠಾಣೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳೊಂದಿಗೆ ಕಾಲ್ನಡಿಗೆ ಮೂಲಕ ವಿಶೇಷ ಗಸ್ತು ಮಾಡಿರುತ್ತಾರೆ.

ಚಾಮರಾಜನಗರ ಜಿಲ್ಲೆಯಲ್ಲಿ “ಮನೆ ಮನೆಗೆ ಪೊಲೀಸ್” ಕಾರ್ಯಕ್ರಮ

0

ಚಾಮರಾಜನಗರ: “ಮನೆ ಮನೆಗೆ ಪೊಲೀಸ್” ಎಂಬ ವಿನೂತನ ಕಾರ್ಯಕ್ರಮದ ಅಂಗವಾಗಿ ಕೊಳ್ಳೇಗಾಲ ಪಟ್ಟಣ, ಕೊಳ್ಳೇಗಾಲ ಗ್ರಾಮಾಂತರ, ಹಾಗೂ ತೆರಕಣಾಂಬಿ ಪೊಲೀಸ್ ಠಾಣಾ ವ್ಯಾಪ್ತಿಯ ಪಟ್ಟಣ ಹಾಗೂ ಗ್ರಾಮಗಳಿಗೆ ಪೊಲೀಸ್ ಅಧಿಕಾರಿ ಸಿಬ್ಬಂದಿಗಳು ಮನೆ ಮನೆಗೆ ಭೇಟಿ ನೀಡಿಸುರಕ್ಷತೆ, ಭದ್ರತೆ, ಕಾನೂನು ಸುವ್ಯವಸ್ಥೆ, ಅಪರಾಧ ತಡೆ ಮುಂತಾದ ವಿಷಯಗಳ ಬಗ್ಗೆ ಜಾಗೃತಿ ಮೂಡಿಸುವುದರೊಂದಿಗೆ ಸಾರ್ವಜನಿಕರಿಂದ ಇಲಾಖೆಗೆ ಸಂಬಂಧಿಸಿದ ಅಹವಾಲು ಮತ್ತು ಸಲಹೆಗಳ ಕುರಿತು ಚರ್ಚಿಸಲಾಯಿತು.

ಕೊಪ್ಪಳನಗರದಲ್ಲಿ ಪೋಲೀಸರ ಪಥಸಂಚಲನ

0

ಕೊಪ್ಪಳ: ಕೊಪ್ಪಳ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಹಸನರಸ್ತೆ, ಶಿವಾಜಿ ಸರ್ಕಲ್, ಕೋಟೆ ಏರಿಯಾ, ಗೌರಿ ಅಂಗಳ, ವಾರಕಾರ ಓಣಿ, ದಿಡ್ಡಿಕೇರಿ, ಹುಲಿಕೇರಿ, ಗಡಿಯಾರ ಕಂಬ ಮುಖಾಂತರ ಪಥಸಂಚಲನ ನಡೆಸಲಾಯಿತು

ಶಿರಗುಪ್ಪದಲ್ಲಿ ಗೌರಿ-ಗಣೇಶ, ಈದ್ -ಮಿಲಾದ್ ಹಬ್ಬಗಳ ಪ್ರಯುಕ್ತ ಶಾಂತಿ ಸಭೆ

0

ಬಳ್ಳಾರಿ: ಮುಂಬರುವ ಗೌರಿ-ಗಣೇಶ, ಹಿದ್ -ಮಿಲಾದ್ ಹಬ್ಬಗಳನ್ನು ಸಾರ್ವಜನಿಕರು ಶಾಂತ & ಸುರಕ್ಷಾತಾ ರೀತಿಯಲ್ಲಿ ಆಚರಣೆ ಮಾಡಲು , ಸರ್ಕಾರಿ ನಿಯಮಗಳನ್ನು ಪಾಲನೆ ಮಾಡುವ ಬಗ್ಗೆ & ಶಾಂತಿ ಸಭೆಯನ್ನು ಸಿರುಗುಪ್ಪ ಪೊಲೀಸ್ ಠಾಣೆಯಲ್ಲಿ ನಡೆಸಲಾಯಿತು ಈ ಸಮಯದಲ್ಲಿ ಇತರೆ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.