“ಮನೆ-ಮನೆಗೆ ಪೊಲೀಸ್” ಎಂಬ ಪರಿಕಲ್ಪನೆಯಡಿ ಕವಲಂದೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಗ್ರಾಮಗಳಿಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿ ಮಹಿಳಾ ಮತ್ತು ಮಕ್ಕಳ ಸುರಕ್ಷತೆ,ಸೈಬರ್ ಅಪರಾಧ,ಬಾಲ್ಯ ವಿವಾಹದ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಯಿತು.

“ಮನೆ-ಮನೆಗೆ ಪೊಲೀಸ್” ಎಂಬ ಪರಿಕಲ್ಪನೆಯಡಿ ಕವಲಂದೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಗ್ರಾಮಗಳಿಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿ ಮಹಿಳಾ ಮತ್ತು ಮಕ್ಕಳ ಸುರಕ್ಷತೆ,ಸೈಬರ್ ಅಪರಾಧ,ಬಾಲ್ಯ ವಿವಾಹದ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಯಿತು.

ಗದಗ: ಬೆಟಗೇರಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕಳ್ಳತನ ಪ್ರಕರಣವನ್ನು ಡಿಎಸ್ಪಿ ಗದಗ ರವರ ನೇತೃತ್ವದ ತಂಡ ಯಶಸ್ವಿಯಾಗಿ ಭೇದಿಸಿ, ಇಬ್ಬರು ಆರೋಪಿತರನ್ನು ಬಂಧಿಸಿದೆ. ಆರೋಪಿತರಿಂದ ₹4,17,942 ಮೌಲ್ಯದ ನಟ್-ಬೋಲ್ಟ್,ಡೈ ಹಾಗೂ ಸ್ಕ್ರೂ ಗಳನ್ನು ಹಾಗೂ ಕೃತ್ಯಕ್ಕೆ ಬಳಸಿದ ಎರಡು ಆಟೋ-ರಿಕ್ಷಾಗಳನ್ನು ವಶಪಡಿಸಿಕೊಂಡು ತನಿಖೆ ಮುಂದುವರೆಸಿದೆ. ಈ ಕಾರ್ಯಾಚರಣೆಯಲ್ಲಿ ಶ್ರಮಿಸಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿರವರ ಕಾರ್ಯಕ್ಷಮತೆಯನ್ನು ಮಾನ್ಯ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಶ್ರೀ ರೋಹನ್ ಜಗದೀಶ್ ಐಪಿಎಸ್ ರವರು ಶ್ಲಾಘಿಸಿರುತ್ತಾರೆ.

ಕಲಬುರಗಿ ನಗರದ ಸಬ್ ಅರ್ಬನ್ ಪೊಲೀಸ್ ಠಾಣೆಯಲ್ಲಿ ಎಸ್.ಸಿ/ಎಸ್.ಟಿ ಸಮುದಾಯದವರ ಸಭೆ ನಡೆಸಲಾಯಿತು. ಈ ಸಂಧರ್ಭದಲ್ಲಿ ಅವರ ಕುಂದು ಕೊರತೆಗಳನ್ನು ಆಲಿಸಿ ಸಮಸ್ಯೆಗಳಿಗೆ ಪರಿಹಾರ ಕೈಗೊಳ್ಳುವ ಬಗ್ಗೆ ಭರವಸೆ ನೀಡಲಾಯಿತು. ಇದೇ ಸಂಧರ್ಭದಲ್ಲಿ ಮನೆ-ಮನೆಗೆ ಪೊಲೀಸ್ ಪರಿಕಲ್ಪನೆ ಕುರಿತು ಅರಿವು ಮೂಡಿಸಲಾಯಿತು.



ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ, ಕಾರವಾರ ಗ್ರಾಮೀಣ ಹಾಗೂ ಶಿರಸಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಮನೆಗಳಿಗೆ ಭೇಟಿ ನೀಡಿ, ಮನೆ ಮನೆಗೆ ಪೊಲೀಸ್ ಕಾರ್ಯಕ್ರಮದ ಉದ್ದೇಶದ ಬಗ್ಗೆ ತಿಳಿಸಿ, ಜಾಗೃತಿ ಮೂಡಿಸಲಾಯಿತು.






ಹಾಸನ : Tibet women association ನವರು ಹನೂರು ಪೊಲೀಸ್ ಠಾಣೆಗೆ ಭೇಟಿ ನೀಡಿ ರಕ್ಷಾ ಬಂಧನ ಹಬ್ಬದ ಪ್ರಯುಕ್ತ ಶುಭಾಶಯ ಕೋರಿದರು.

ಮಾನ್ಯ ಪೊಲೀಸ್ ಅಧೀಕ್ಷಕರು ನಿನ್ನೆ ರಾತ್ರಿ ಹಿರಿಯೂರು & ಐಮಂಗಲ ಠಾಣಾ ವ್ಯಾಪ್ತಿಯಲ್ಲಿ ವಿಶೇಷ ನೈಟ್ ರೌಂಡ್ಸ್ ನ್ನು ಕೈಗೊಂಡು ರಾತ್ರಿ ಕರ್ತವ್ಯದಲ್ಲಿದ್ದ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ಹಾಗೂ ಐಮಂಗಲ & ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣೆಗಳಿಗೆ ಮತ್ತು ಚೆಕ್ ಪೊಸ್ಟ್ ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಚಾಮರಾಜನಗರ: “ಮನೆ ಮನೆಗೆ ಪೊಲೀಸ್” ಎಂಬ ವಿನೂತನ ಕಾರ್ಯಕ್ರಮದ ಅಂಗವಾಗಿ ದಿ:10-08-2025 ರಂದು ಹನೂರು, ಬೇಗೂರು ಹಾಗೂ ಗುಂಡ್ಲುಪೇಟೆ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಪೊಲೀಸ್ ಅಧಿಕಾರಿ ಸಿಬ್ಬಂದಿಗಳು ಮನೆ ಮನೆಗೆ ಭೇಟಿ ನೀಡಿ ಸುರಕ್ಷತೆ, ಭದ್ರತೆ, ಕಾನೂನು ಸುವ್ಯವಸ್ಥೆ, ಅಪರಾಧ ತಡೆ ಮುಂತಾದ ವಿಷಯಗಳ ಬಗ್ಗೆ ಜಾಗೃತಿ ಮೂಡಿಸುವುದರೊಂದಿಗೆ ಸಾರ್ವಜನಿಕರಿಂದ ಇಲಾಖೆಗೆ ಸಂಬಂಧಿಸಿದ ಅಹವಾಲು ಮತ್ತು ಸಲಹೆಗಳ ಕುರಿತು ಚರ್ಚಿಸಲಾಯಿತು.


ಕೋಲಾರ ಜಿಲ್ಲೆಯ ಮಾಲೂರು ಪೊಲೀಸ್ ಠಾಣೆಯಲ್ಲಿ ಸಾರ್ವಜನಿಕರು ತಮ್ಮ ಮೊಬೈಲ್ ಫೋನ್ ಗಳು ಕಳುವಾಗಿರುವ ಬಗ್ಗೆ ದೂರು ನೀಡಿದ್ದು ಅದರಂತೆ ಸಿ. ಇ. ಐ.ಅರ್ ಪೋರ್ಟೆಲ್ ಮೂಲಕ ಕಳುವಾಗಿದ್ದ ಮೊಬೈಲ್ಗಳನ್ನು ಪತ್ತೆ ಮಾಡಿ ಮಾಲೀಕರಿಗೆ ಹಸ್ತಾಂತರಿಸಲಾಯಿತು.


ಚಿತ್ರದುರ್ಗ: ಮಾನ್ಯ ಪೊಲೀಸ್ ಅಧೀಕ್ಷಕರ ನಿರ್ದೇಶನದ ಮೇರೆಗೆ ಜಿಲ್ಲಾ ಪೊಲೀಸ್ ಕವಾಯತು ಮೈದಾನ ಚಿತ್ರದುರ್ಗದಲ್ಲಿ ಪ್ರಭಾರ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಶ್ರೀ ಉಮೇಶ್ ಈಶ್ವರ ನಾಯ್ಕ್ ರವರು ಚಿತ್ರದುರ್ಗ ಉಪವಿಭಾಗದ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ವಾರದ ಕವಾಯತನಲ್ಲಿ Mob operation parade, & ಲಾಟಿ ಪೇರೆಡ್ ಗಳ ವಿಕ್ಷಣೆ ನಡೆಸಿ, ಪರಿಶೀಲಿಸಿದರು.

ಮೈಸೂರು : ಚಾಮುಂಡಿ ಮಹಿಳಾ ಸುರಕ್ಷಾ ಪಡೆಯ ಮಹಿಳಾ ಅಧಿಕಾರಿ & ಸಿಬ್ಬಂದಿಗಳು ಹೆಬ್ಬಾಳ್, ವಿ.ವಿ.ಪುರಂ, ಕೃಷ್ಣರಾಜ & ಉದಯಗಿರಿ ಪೊಲೀಸ್ ಠಾಣಾ ಸರಹದ್ದಿನಲ್ಲಿ ಪಾರ್ಕ್ & ಸಾರ್ವಜನಿಕ ಸ್ಥಳಗಳಲ್ಲಿ ಮಹಿಳೆಯರು & ಹಿರಿಯ ನಾಗರೀಕರಿಗೆ ಮನೆಗಳ್ಳತನ, ಸರಗಳ್ಳತನ & ಸೈಬರ್ ಅಪರಾಧಗಳ ಬಗ್ಗೆ ಅರಿವು ಮೂಡಿಸಿರುತ್ತಾರೆ. 1930, 112 ಸಹಾಯವಾಣಿಗಳ ಬಗ್ಗೆ ತಿಳಿಸಿರುತ್ತಾರೆ.



