

ಶನಿವಾರ ರಂದು ನಡೆದ ದಾವಣಗೆರೆ ನಗರದ ಹೈಸ್ಕೂಲ್ ಮೈದಾನದಲ್ಲಿನ ಹಿಂದೂ ಮಹಾ ಗಣೇಶ ವಿಸರ್ಜನಾ ಮೆರವಣಿಗೆಗೆ ಪೊಲೀಸ್ ಅಧೀಕ್ಷಕರಾದ ಶ್ರೀಮತಿ ಉಮಾ ಪ್ರಶಾಂತ್ ಐಪಿಎಸ್ ರವರು ಚಾಲನೆ ನೀಡಿದರು. ಮೆರವಣಿಗೆಯುದ್ದಕ್ಕೂ ಸಂಚರಿಸಿ ಬಂದೋಬಸ್ತ್ ಕರ್ತವ್ಯಕ್ಕೆ ನಿಯೋಜನೆಗೊಂಡ ಅಧಿಕಾರಿ ಸಿಬ್ಬಂದಿಗಳಿಗೆ ಸೂಕ್ತ ಕರ್ತವ್ಯ ಸೂಚನೆಗಳನ್ನು ನೀಡಿದರು. ಗಣೇಶ ವಿಸರ್ಜನಾ ಮೆರವಣಿಗೆ ಶಾಂತಿಯುತವಾಗಿ ಸಂಭ್ರಮದಿಂದ ಮುಕ್ತಾಯಗೊಂಡಿದ್ದು, ಎಲ್ಲಾ ಭಕ್ತಾದಿಗಳಿಗೆ ಹಾಗೂ ಸಾರ್ವಜನಿಕರಿಗೆ ಕರ್ತವ್ಯ ನಿರ್ವಹಿಸಿದ ಅಧಿಕಾರಿ ಸಿಬ್ಬಂದಿಗಳಿಗೆ ಧನ್ಯವಾದ ತಿಳಿಸಿದರು.





ಭಟ್ಕಳದ ಎ .ಕೆ ಹಫೀಜ್ಕಾ ಮೆಮೋರಿಯಲ್ ಹಾಲ್ ನಲ್ಲಿ ಭಟ್ಕಳ ಉಪವಿಭಾಗದ ಪೊಲೀಸ್ ಅಧಿಕಾರಿ/ಸಿಬ್ಬಂದಿಗಳಿಗೆ ಮಾನಸಿಕ ಮತ್ತು ದೈಹಿಕ ಸದೃಢತೆ ಹಾಗೂ ಒತ್ತಡ ನಿರ್ವಹಣೆಗಾಗಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಯಿತು. ಉಪನ್ಯಾಸಕಾರಾಗಿ ಪ್ರೋ. ಶ್ರೀ ಪ್ರವೀಣ ವಿ.ಜಿ ರವರು ಹಾಜರಿದ್ದರು.



ಗಣೇಶ್ 13 ನೇ ದಿನದ ವಿಸರ್ಜನೆ ಅಂಗವಾಗಿ ಕೊಪ್ಪಳ ನಗರದಲ್ಲಿ ಡಿ ಎಸ್ ಪಿ ಕೊಪ್ಪಳ ರವರಿಂದ ಸಿಬ್ಬಂದಿ ಮತ್ತು ಅಧಿಕಾರಿಗಳಿಗೆ ರೋಲ್ ಕಾಲ್ ತೆಗೆದುಕೊಂಡು ಸೂಕ್ತವಾಗಿ ಬಂದೋಬಸ್ತ್ ಕರ್ತವ್ಯವನ್ನು ನಿರ್ವಹಿಸಲು ಸೂಕ್ತ ಸಲಹೆ ಸೂಚನೆಗಳನ್ನು ನೀಡಲಾಯಿತು.


