ದೇವಸ್ಥಾನಗಳಲ್ಲಿ ಕಳ್ಳತನ ನಡೆದ ಸ್ಥಳ ಪರಿಶೀಲಿಸಿದ ಪೊಲೀಸ್‌ ಅಧೀಕ್ಷಕರು

ಮಂಡ್ಯ: ಮಾನ್ಯ ಪೊಲೀಸ್‌ ಅಧೀಕ್ಷಕರಾದ ಶ್ರೀ ಮಲ್ಲಿಕಾರ್ಜುನ ಬಾಲದಂಡಿ ಐಪಿಎಸ್‌ ರವರು ಕಿರುಗಾವಲು ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಾಳಿಗೆಕೊಪ್ಪಲು ಗ್ರಾಮ ಏಳೂರಮ್ಮ & ದಂಡಿಮಾರಮ್ಮ ದೇವಸ್ಥಾನಗಳಲ್ಲಿ ಕಳ್ಳತನ ನಡೆದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಕೃತ್ಯದ ಬಗ್ಗೆ ಮಾಹಿತಿ ಪಡೆದು ತನಿಖಾಧಿಕಾರಿಗೆ ಪ್ರಕರಣದ ತನಿಖೆ ಮತ್ತು ಆರೋಪಿಗಳ ಪತ್ತೆ ಬಗ್ಗೆ ಸೂಕ್ತ ಮಾರ್ಗದರ್ಶನ ನೀಡಿರುತ್ತಾರೆ.

ಬ್ರೂಸ್ ಪೇಟೆ ಪೊಲೀಸರ ಕಾರ್ಯಚರಣೆ

ಬಳ್ಳಾರಿ: ಬ್ರೂಸ್ ಪೇಟೆ ಪೊಲೀಸರ ಕಾರ್ಯಚರಣೆ ಒಬ್ಬ ಕಳ್ಳತನ ಆರೋಪಿತನ ಬಂಧನ ಆತನಿಂದ ರೂ. 4,08,040/- ಬೆಲೆಬಾಳುವ ಬೆಳ್ಳಿ & ಬಂಗಾರದ ಆಭರಣಗಳು ವಶ.

ಚಿಕ್ಕಬಳ್ಳಾಪುರದಲ್ಲಿ “ಮನೆ ಮನೆಗೆ ಪೊಲೀಸ್” ಕಾರ್ಯಕ್ರಮ

ಕೆಂಚಾರ್ಲಹಳ್ಳಿ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಯವರು ಠಾಣಾ ವ್ಯಾಪ್ತಿಯ ಚೀಲಕಲನೇರ್ಪು ಗ್ರಾಮದ ಮನೆಗಳಿಗೆ ಭೇಟಿ ನೀಡಿ, ಹೊಸ ಬೀಟ್ ವ್ಯವಸ್ಥೆಯಾದ ”ಮನೆ ಮನೆಗೆ ಪೊಲೀಸ್” ಕಾರ್ಯಕ್ರಮದ ಬಗ್ಗೆ ಜನರಿಗೆ ಮಾಹಿತಿಯನ್ನು ನೀಡಿದ್ದು, ಪೋಕ್ಸೋ ಕಾಯ್ದೆ, ಬಾಲ್ಯ ವಿವಾಹ ನಿಷೇಧ ಕಾಯ್ದೆ, ಸೈಬರ್ ಅಪರಾಧಗಳು ಹಾಗೂ ತುರ್ತು ಸಹಾಯವಾಣಿಗಳ ಬಗ್ಗೆ ಅರಿವು ಮೂಡಿಸಿರುತ್ತಾರೆ.

ಬೀಳಗಿ ಪೊಲೀಸರಿಗೆ ವೈದ್ಯಕೀಯ ತರಬೇತಿ

ಬೀಳಗಿ ಪೊಲೀಸ್ ಠಾಣೆಯ ಅಧಿಕಾರಿ/ಸಿಬ್ಬಂದಿಯವರಿಗೆ, ರಸ್ತೆ ಅಪಘಾತ ಸಂದರ್ಭಗಳಲ್ಲಿ ಘಟನಾ ಸ್ಥಳದಲ್ಲಿ ಪ್ರಥಮ ಚಿಕಿತ್ಸೆ, ಗಾಯಳುಗಳನ್ನು ಆಸ್ಪತ್ರೆಗಳಿಗೆ ಸಾಗಿಸುವಾಗ ತಕ್ಷಣದ ಆರೈಕೆ ಮತ್ತು ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆಗಳ ಕುರಿತು ತಜ್ಞ ವೈದ್ಯರಿಂದ ತರಬೇತಿ ನೀಡಲಾಯಿತು. ಪ್ರತಿಯೊಬ್ಬ ಅಧಿಕಾರಿ/ಸಿಬ್ಬಂದಿಯವರು ತಕ್ಷಣವೇ ಪ್ರತಿಕ್ರಿಯಿಸಲು ಮತ್ತು ಜೀವಗಳನ್ನು ಉಳಿಸಲು ಸಿದ್ಧರಾಗಿದ್ದಾರೆ ಎಂದು ಖಚಿತಪಡಿಸಿಕೊಳ್ಳಲಾಗಿರುತ್ತದೆ.

ಕಾರವಾರ ಜಿಲ್ಲೆಯಲ್ಲಿ ವಾರದ ಪೊಲೀಸ್ ಕವಾಯತು

ಕಾರವಾರ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಶ್ರೀ ಕೃಷ್ಣಮೂರ್ತಿ, ಜಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರು -1 ರವರ ನೇತೃತ್ವದಲ್ಲಿ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳ ವಾರದ ಕವಾಯತು ಕೈಗೊಂಡು,ಕುಂದು ಕೊರತೆಯನ್ನು ಆಲಿಸಲಾಯಿತು.

ಉಡುಪಿ ಜಿಲ್ಲೆಯಲ್ಲಿ ಗಣಪತಿ ಮತ್ತು ಈದ್ ಮಿಲಾದ್ ಹಬ್ಬದ ಪ್ರಯುಕ್ತ ಸಭೆ

ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿಯ ಸಭಾಂಗಣದಲ್ಲಿ ಜಿಲ್ಲೆಯ ಎಲ್ಲಾ ಅಧಿಕಾರಿ ಸಿಬ್ಬಂದಿಗಳೊಂದಿಗೆ ಜಿಲ್ಲಾ ಪೊಲೀಸ್ , ಅಧೀಕ್ಷಕರು ಮುಂಬರುವ ಗಣೇಶ ಚತುರ್ಥಿ ಮತ್ತು ಈದ್ ಮಿಲಾದ್ ಹಬ್ಬಗಳ ಆಚರಣೆಯ ಸಮಯದಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತ ಕ್ರಮಗಳ ಬಗ್ಗೆ ಚರ್ಚಿಸಿದರು.

ಕಲಬುರಗಿಯಲ್ಲಿ “ಮನೆ ಮನೆಗೆ ಪೊಲೀಸ್”

ಗ್ರಾಮೀಣ ಉಪವಿಭಾಗದ ಕಮಲಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ಬೆಳಕೋಟಾ ಗ್ರಾಮದಲ್ಲಿ “ಮನೆ-ಮನೆಗೆ ಪೊಲೀಸ್” ಎಂಬ ಪರಿಕಲ್ಪನೆಯಡಿ ಮನೆಗಳಿಗೆ ಭೇಟಿ ನೀಡಿ, ಪೊಲೀಸ್ ಇಲಾಖೆಯ ತುರ್ತುಸೇವೆ, ಸೈಬರ್ ಅಪರಾಧ ಹಾಗೂ ಇನ್ನಿತರ ವಿಷಯಗಳ ಬಗ್ಗೆ ತಿಳುವಳಿಕೆ ನೀಡಿ ಅರಿವು ಮೂಡಿಸಲಾಯಿತು.

ಭಾರತದ ಸ್ವಾತಂತ್ರ್ಯೋತ್ಸವ ಆಚರಣೆ ಸಂಬಂಧ ಪೂರ್ವಸಿದ್ಧತಾ ಸಭೆ

ಮೈಸೂರು : ಭಾರತದ ಸ್ವಾತಂತ್ರ್ಯೋತ್ಸವ ಆಚರಣೆ ಸಂಬಂಧ ಪೂರ್ವಸಿದ್ಧತಾ ಸಭೆಯನ್ನು ಈ ದಿನ ಪೊಲೀಸ್ ಆಯುಕ್ತರ ಕಛೇರಿಯಲ್ಲಿ ನಡೆಸಲಾಯಿತು. ಸಭೆಯ ಅಧ್ಯಕ್ಷತೆಯನ್ನು ಕುಮಾರಿ ಬಿಂದು ಮಣಿ RN IPS, ಉಪ ಪೊಲೀಸ್ ಆಯುಕ್ತರು, ಕಾನೂನು & ಸುವ್ಯಸ್ಥೆ ರವರು ವಹಿಸಿದ್ದರು. ಸಭೆಯಲ್ಲಿ ಉಪ ಪೊಲೀಸ್ ಆಯುಕ್ತರಾದ ಶ್ರೀ ಸುಂದರ್ ರಾಜ್ KS ಅಪರಾಧ & ಸಂಚಾರ ರವರು, ಹಿರಿಯ ಪೊಲೀಸ್ ಅಧಿಕಾರಿಗಳು & ಇತರೆ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಧಾರವಾಡ ಜಿಲ್ಲೆಯಲ್ಲಿ ವರದ ಕವಾಯತು

ದಿನಾಂಕ: 08-08-2025 ರಂದು ಜಿಲ್ಲಾ ಕವಾಯತ್ ಮೈದಾನದಲ್ಲಿ ಶ್ರೀ ಗುಂಜನ್‌ ಆರ್ಯ,ಐಪಿಎಸ್ ಮಾನ್ಯ ಪೊಲೀಸ್ ಅಧೀಕ್ಷಕರು,ಧಾರವಾಡ ಜಿಲ್ಲೆ, ಧಾರವಾಡ ರವರು ಗೌರವ ರಕ್ಷೆಯನ್ನು ಪಡೆದು, ಜಿಲ್ಲೆಯ ಅಧಿಕಾರಿ/ಸಿಬ್ಬಂದಿರವರು ಗಳಿಗೆ ಮುಂಬರುವ ಬಂದೋಬಸ್ತ್‌ ಗಳ ಬಗ್ಗೆ ಗಮನ ಹರಿಸಲು ಹಾಗೂ 112 ERV vehicleಗಳ ( React Respond Resolve ) ಕಾರ್ಯಕ್ಷಮತೆಯನ್ನು ಹೆಚ್ಚಿಸಿಕೊಳ್ಳಲು ತಿಳಿಸಿದರು.

ಮೈಸೂರು ಪೋಲೀಸರ ತಪಾಸಣೆ

ರಾತ್ರಿ ನಗರದ ಎಲ್ಲಾ ಪೊಲೀಸ್ ಠಾಣಾ ವ್ಯಾಪ್ತಿ ಪ್ರದೇಶಗಳಲ್ಲಿ ಮುಂದುವರೆದ ತಪಾಸಣಾ ಕಾರ್ಯಾಚರಣೆ, ಠಾಣಾ ಅಧಿಕಾರಿಗಳು ಸಿಬ್ಬಂದಿಗಳೊಂದಿಗೆ ಲಾಡ್ಜ್ ಗಳು, ಬಾರ್ ಅಂಡ್ ರೆಸ್ಟೋರೆಂಟ್ ಗಳು, ನಿರ್ಜನ ಪ್ರದೇಶಗಳಲ್ಲಿ ಮತ್ತು ಅನುಮಾನಾಸ್ಪದವಾಗಿ ಕಂಡು ಬಂದ ವಾಹನಗಳು ಮತ್ತು ವ್ಯಕ್ತಿಗಳನ್ನು ತಪಾಸಣೆ ಮಾಡಿದರು.