ಬಾಗಲಕೋಟೆ ಜಿಲ್ಲೆಯಲ್ಲಿ ಪೋಲೀಸರಿಂದ ಕಳೆದುಕೊಂಡ ಮೊಬೈಲ್‌ಗಳು ಮಾಲೀಕರಿಗೆ ವಾಪಸ್

0

ಮುಧೋಳ: ದಿನಾ೦ಕ. 18-08-2025 ರಂದು ಮಾನ್ಯ ಪೊಲೀಸ್ ಅಧೀಕ್ಷಕರು
ಬಾಗಲಕೋಟ ಮತ್ತು ಮಾನ್ಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು. ಬಾಗಲಕೋಟ 1&2
ಮಾನ್ಯ ಡಿ.ಎಸ್‌.ಪಿ ಸಾಹೇಬರು ಜಮಖಂಡಿರವರ ಮಾರ್ಗದರ್ಶನದಲ್ಲಿ 1] ಶ್ರೀ ಎಮ್‌ ಎನ್‌
ಶಿರಹಣ್ಣ ಸಿಪಿಐ ಮುಧೋಳ, ೨.ಅಜಿತಕುಮಾರ ಹೊಸಮನಿ ಪಿ.ಎಸ್‌.ಐ ಮುಧೋಳ (ಎಲ್‌
& ಓ) ನೇತೃತ್ವದಲ್ಲಿ ಸಿಬ್ಬಂದಿಗಳಾದ 1. ಆರ್‌ ಚ ಕಟಗೇರಿ. 2. ಬಿ ಡಿ ಕುಠಿ 3. ಎಚ್‌ ಜಿ
ಮಾದರ 4. ಎಮ್‌ ಬಿ ದಳವಾಯಿ 5. ಎಮ್‌ ಎಲ್‌ ಒಡೆಯರ ಇವರುಗಳು ಮುಧೋಳ
ಪೊಲೀಸ್ ಠಾಣೆಯ ವ್ಯಾಪ್ತಿಯ ವಿವಿಧ ಪ್ರದೇಶಗಳಲ್ಲಿ ಕಳೆದು ಹೋದ 19 ಮೊಬೈಲಗಳನ್ನು
ಸಿಇಐಆರ್‌ ಪೋರ್ಟಲದಲ್ಲಿ ಪತ್ತೆ ಮಾಡಿ ವಾರಸುದಾರರಿಗೆ ಮರಳಿ ಕೊಟ್ಟಿರುತ್ತಾರೆ.

“ನಶಾ ಮುಕ್ತ ಭಾರತ ಅಭಿಯಾನ 2025” ಕಾರ್ಯಕ್ರಮ

0

ಮಂಡ್ಯ: “ನಶಾ ಮುಕ್ತ ಭಾರತ ಅಭಿಯಾನ 2025” ಕಾರ್ಯಕ್ರಮವನ್ನು ಮಂಡ್ಯ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಆಡಿಟೋರಿಯಂ ನಲ್ಲಿ ಹಮ್ಮಿಕೊಳ್ಳಲಾಗಿತ್ತು, ಕಾರ್ಯಕ್ರಮದಲ್ಲಿ ಮಾನ್ಯ ಜಿಲ್ಲಾಧಿಕಾರಿಗಳು, ಮಾನ್ಯ ಪೊಲೀಸ್ ಅಧೀಕ್ಷಕರಾದ ಶ್ರೀ ಮಲ್ಲಿಕಾರ್ಜುನ ಬಾಲದಂಡಿ ಐಪಿಎಸ್ ರವರು, ಮಾನ್ಯ ಸಿಇಓ ರವರು, ಮಾನ್ಯ ಅಪರ ಪೊಲೀಸ್ ಅಧೀಕ್ಷಕರು, ಮಂಡ್ಯ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಅಧಿಕಾರಿ, ಸಿಬ್ಬಂದಿಗಳು ಹಾಗು ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಚಾಮರಾಜನಗರ ಜಿಲ್ಲೆಯಲ್ಲಿ “ಮನೆ ಮನೆಗೆ ಪೊಲೀಸ್” ಕಾರ್ಯಕ್ರಮ

0

“ಮನೆ ಮನೆಗೆ ಪೊಲೀಸ್” ಎಂಬ ವಿನೂತನ ಕಾರ್ಯಕ್ರಮದ ಅಂಗವಾಗಿ ದಿ:12-08-2025 ರಂದು ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯ ಪಟ್ಟಣ ಹಾಗೂ ಗ್ರಾಮಗಳಿಗೆ ಪೊಲೀಸ್ ಅಧಿಕಾರಿ ಸಿಬ್ಬಂದಿಗಳು ಮನೆ ಮನೆಗೆ ಭೇಟಿ ನೀಡಿ ಸುರಕ್ಷತೆ, ಭದ್ರತೆ, ಕಾನೂನು ಸುವ್ಯವಸ್ಥೆ, ಅಪರಾಧ ತಡೆ ಮುಂತಾದ ವಿಷಯಗಳ ಬಗ್ಗೆ ಜಾಗೃತಿ ಮೂಡಿಸುವುದರೊಂದಿಗೆ ಸಾರ್ವಜನಿಕರಿಂದ ಇಲಾಖೆಗೆ ಸಂಬಂಧಿಸಿದ ಅಹವಾಲು ಮತ್ತು ಸಲಹೆಗಳ ಕುರಿತು ಚರ್ಚಿಸಲಾಯಿತು.

ಸೈಬರ್ ಅಪರಾಧ ಮತ್ತು ಮಹಿಳಾ ಸುರಕ್ಷತೆ ಬಗ್ಗೆ IPS ಶೋಭಾ ರಾಣಿಯಿಂದ ಮಾರ್ಗದರ್ಶನ

0

ಬಳ್ಳಾರಿ: ಅಲಂ ಸುಮಂಗಳಮ್ಮ ಮಹಿಳಾ ಕಾಲೇಜ್ ನಲ್ಲಿ ನಡೆದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಅತೀ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿನಿಯರಿಗೆ ಸನ್ಮಾನವನ್ನು ಮಾಡಿ ಸಂವಾದ ನಡೆಸಿ ಸೈಬರ್ ಅಪರಾಧಗಳು, ಮಹಿಳಾ & ಮಕ್ಕಳ ಮೇಲಿನ ದೌಜನ್ಯ ಪ್ರಕರಣಗಳು, ಬಾಲ್ಯ ವಿವಾಹ ಮುಂತಾದ ವಿಷಯಗಳ ಬಗ್ಗೆ ಅರಿವು ಮೂಡಿಸಲಾಯಿತು.

ಮೈಸೂರು ಪೋಲೀಸರ ರಾತ್ರಿ ಗಸ್ತು

0

ದಿ:12-08-2025ರ ರಾತ್ರಿ ನಜರ್ ಬಾದ್ ಪೊಲೀಸ್ ಠಾಣೆಯ ಅಧಿಕಾರಿ & ಸಿಬ್ಬಂದಿಗಳು ತಮ್ಮ ಠಾಣಾ ವ್ಯಾಪ್ತಿಯ ಪ್ರದೇಶಗಳಲ್ಲಿ ಅಪರಾಧ ಪ್ರಕರಣಗಳನ್ನು ತಡೆಗಟ್ಟಲು, ಸಾರ್ವಜನಿಕ ಸುರಕ್ಷತೆಯನ್ನು ಕಾಪಾಡಲು ಹಾಗೂ ರೌಡಿಗಳು/ಎಂಒಬಿಗಳು/ಸಮಾಜ ಘಾತುಕ ವ್ಯೆಕ್ತಿಯಗಳ ಮೇಲೆ ನಿಗಾವಹಿಸಲು ಕಮಾಂಡೋ ಪಡೆಯೊಂದಿಗೆ ಕಾಲ್ನಡಿಗೆ ಮೂಲಕ ವಿಶೇಷ ಗಸ್ತು ಮಾಡಿ ತಮ್ಮ ಠಾಣಾ ವ್ಯಾಪ್ತಿಯ ಪ್ರದೇಶಗಳ ಮೇಲೆ ನಿಯಂತ್ರಣ ಹೊಂದುವ ಸಲುವಾಗಿ ಅನುಮಾನಸ್ಪದ ವ್ಯೆಕ್ತಿಗಳು & ವಾಹನಗಳನ್ನು ತಪಾಸಣೆ ನಡೆಸಲಾಯಿತು.

ಉತ್ತರ ಕನ್ನಡ ಜಿಲ್ಲೆಯಲ್ಲಿ ಗಣೇಶ ಚುತುರ್ಥಿ ಹಬ್ಬದ ಪೂರ್ವಭಾವಿ ಸಭೆ

0

ಮುಂಬರುವ ಗಣೇಶ ಚುತುರ್ಥಿ ಹಬ್ಬದ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಠಿಯಿಂದ ಉ.ಕ ಜಿಲ್ಲೆಯ ಪೊಲೀಸ್‌ ಠಾಣಾ ವ್ಯಾಪ್ತಿಯ ವಿವಿಧ ಧರ್ಮದ ಮುಖಂಡರುಗಳು, ಗಣೇಶ ಮೂರ್ತಿ ಪ್ರತಿಷ್ಠಾಪನಾ ಕಮೀಟಿ ಅಧ್ಯಕ್ಷ & ಸದಸ್ಯರುಗಳು ಹಾಗೂ ಸಂಬಂಧಪಟ್ಟ ಇಲಾಖೆಯವರನ್ನು ಬರಮಾಡಿಕೊಂಡು, ಶಾಂತಿಪಾಲನಾ ಸಭೆಯನ್ನು ಜರೂಗಿಸಿ, ಸೂಕ್ತ ಸಲಹೆ ಸೂಚನೆಗಳನ್ನು ನೀಡಲಾಯಿತು.

ಮಹಾಗಣಪತಿಯ ಬೃಹತ್ ಶೋಭಾಯಾತ್ರೆ ಪ್ರಯುಕ್ತ ಪೂರ್ವಭಾವಿ ಸಭೆ

0

ಮುಂಬರುವ ಚಿತ್ರದುರ್ಗ ಹಿಂದೂ ಮಹಾಗಣಪತಿಯ ಬೃಹತ್ ಶೋಭಾಯಾತ್ರೆ ಪ್ರಯುಕ್ತ ಮಾನ್ಯ ಪೊಲೀಸ್ ಅಧೀಕ್ಷಕರು ಇಂದು ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಹಿಂದೂ ಸಂಘಟನೆಯ ಮುಖಂಡರುಗಳೊಂದಿಗೆ ಹಾಗೂ ಪದಾಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ನೆಡೆಸಿ ಕೈಗೊಳ್ಳಬೇಕಾದ ಮುಂಜಾಗ್ರತ ಕ್ರಮಗಳ ಬಗ್ಗೆ ಹಾಗೂ ಹಬ್ಬದ ಆಚರಣೆ ಮತ್ತು ಶೋಭಾಯಾತ್ರೆ ಸಮಯದಲ್ಲಿ ಯಾವುದೇ ರೀತಿಯ ಆಹಿತಕರ ಘಟನೆಗಳು ನಡೆಯದಂತೆ ಕ್ರಮವಹಿಸಲು ಸೂಕ್ತ ಸೂಚನೆಗಳನ್ನು ನೀಡಿದರು.

ರ‍್ಯಾಗಿಂಗ್ ನಿಂದಾಗುವ ದುಷ್ಪರಿಣಾಮಗಳ ಕುರಿತು ತಿಳುವಳಿಕೆ, ಕಾನೂನು ಅರಿವು ಕಾರ್ಯಕ್ರಮ

0

ಬೀಳಗಿ ಪೊಲೀಸ್ ಠಾಣಾ ವ್ಯಾಪ್ತಿಯ ಬಾಡಗಂಡಿಯ ಶ್ರೀಮತಿ ಶಾಂತಾದೇವಿ ಮೆಮೋರಿಯಲ್ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ರ‍್ಯಾಗಿಂಗ್ ವಿರೋಧಿ ದಿನ ಹಾಗೂ ಸಪ್ತಾಹದ ಪ್ರಯುಕ್ತ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ವಿದ್ಯಾರ್ಥಿಗಳಿಗೆ ರ‍್ಯಾಗಿಂಗ್ ನಿಂದಾಗುವ ದುಷ್ಪರಿಣಾಮಗಳ ಕುರಿತು ತಿಳುವಳಿಕೆ ನೀಡಿ,ಕಾನೂನು ಅರಿವು ಮೂಡಿಸಲಾಯಿತು.

ಉತ್ತರ ಕನ್ನಡ ಜಿಲ್ಲೆಯಲ್ಲಿ “ಮನೆ ಮನೆಗೆ ಪೊಲೀಸ್ ಕಾರ್ಯಕ್ರಮ”

0

ಮನೆ ಮನೆಗೆ ಪೊಲೀಸ್‌ ಎಂಬ ಕಾರ್ಯಕ್ರಮದ ನಿಮಿತ್ತ ಉತ್ತರ ಕನ್ನಡ ಜಿಲ್ಲೆಯ ವಿವಿಧ ಪೊಲೀಸ್‌ ಠಾಣಾ ವ್ಯಾಪ್ತಿಯ ಗ್ರಾಮ ಹಾಗೂ ನಗರಗಳಲ್ಲಿರುವ ಮನೆಗಳಿಗೆ ಭೇಟಿ ನೀಡಿ, ಈ ಕಾರ್ಯಕ್ರಮದ ಉದ್ದೇಶದ ಬಗ್ಗೆ ತಿಳಿಸಿ, ಜಾಗೃತಿ ಮೂಡಿಸಲಾಯಿತು.